ಬಂಡೀಪುರದಲ್ಲಿ ಸಸಿ ನೆಡುವ ಮೂಲ ಸ್ವಾತಂತ್ರ್ಯ ದಿನಾಚರಣೆ
Update: 2017-08-15 22:17 IST
ಗುಂಡ್ಲುಪೇಟೆ, ಆ. 15: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಹುಲಿ ಯೋಜನೆಯ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಹುಲಿ ಯೋಜನೆಯ ನಿರ್ದೇಶಕ ಅಂಬಾಡಿ ಮಾಧವ್ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಎಸಿಎಫ್ ಅಂಥೋನಿ ಮರಿಯಪ್ಪ, ವಲಯಾರಣ್ಯಾಧಿಕಾರಿ ಜೆ.ಗೋವಿಂದರಾಜು, ಡಿ ಆರ್ ಎಫ್ ಓ ಅನಿಲ್ ಗೌಡ ಹಾಗೂ ಸಿಬ್ಬಂದಿಗಳು ಹಾಜರಿದ್ದರು.