ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

Update: 2017-08-16 07:11 GMT

ಮಂಗಳೂರು, ಆ. 16: ನೂತನ ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಇಂದು ಅಧಿಕಾರ ಸ್ವೀಕರಿಸಿದರು. ಪಶ್ಚಿಮ ವಲಯ ಐಜಿಪಿಯಾಗಿದ್ದ ಹರಿಶೇಖರನ್ ಅವರಿಂದ ಅಧಿಕಾರ ಹಸ್ತಾಂತರ ನಡೆಯಿತು.

ನಂತರ ಮಾತನಾಡಿದ ಹೇಮಂತ್ ನಿಂಬಾಳ್ಕರ್, ಸಮಾಜದ ಸ್ವಾಸ್ಥ್ಯ ಕದಡುವ ಚಟುವಟಿಕೆಗೆ ಕಾನೂನು ರೀತಿಯಲ್ಲಿ ತಕ್ಕ ಉತ್ತರ ನೀಡುವ ವ್ಯವಸ್ಥೆಯಿದೆ. ಸಾಮಾನ್ಯ ಜನರಿಗೆ ಸೇವೆ ನೀಡಲು‌ ಇಲಾಖೆಯಿಂದ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಜನರ ನೆಮ್ಮದಿಯ ಜೀವನಕ್ಕೆ ಅಡ್ಡ ಬರುವವರಿಗೆ ತಕ್ಕ ಉತ್ತರ ನೀಡಲಾಗುವುದು. ಅಕ್ರಮ ಹಾಗೂ ಅಪರಾಧ ಚಟುವಟಿಕೆ ಯಾವುದೇ ಇರಲಿ ಕಾನೂನು‌ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

2017 ಜನವರಿ 6 ರಂದು ಹರಿಶೇಖರನ್ ಪಶ್ಚಿಮ ವಲಯ ಐಜಿಪಿಯಾಗಿ ಅಧಿಕಾರ ವಹಿಸಿದ್ದರು. ಐಜಿಪಿ ಹರಿಶೇಖರನ್ ಬೆಂಗಳೂರು ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News