ಪಿಎಫ್‌ಐ ವಿರುದ್ಧ ಕ್ರಮಕ್ಕೆ ವಿಹಿಪ ಆಗ್ರಹ

Update: 2017-08-16 13:34 GMT

ಮಂಗಳೂರು, ಆ. 16: ಪಿಎಫ್‌ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಿ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳದ ಜಿಲ್ಲಾಧ್ಯಕ್ಷ ಜಗದೀಶ ಶೇಣವ ಆಗ್ರಹಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿದ್ದರೂ, ನೇರ ಆರೋಪಿಗಳ ಬಂಧನವಾಗಿಲ್ಲ. ಈ ಕೃತ್ಯದಲ್ಲಿ ಜಿಲ್ಲೆಯ ಎಸ್‌ಡಿಪಿಐ ಮತ್ತು ಪಿಎಫ್‌ಐ ನಾಯಕರ ಕೈವಾಡವಿದ್ದು ಅವರನ್ನು ಕೂಡ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವಿಹಿಪ ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್, ಬಜರಂಗದಳ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News