ದೇರಳಕಟ್ಟೆ: ಪಾರ್ಕಿಂಗ್ ಮಾಡಿದ್ದ ಕಾರುಗಳಿಗೆ ದುಷ್ಕರ್ಮಿಗಳಿಂದ ಹಾನಿ

Update: 2017-08-16 13:47 GMT

ಉಳ್ಳಾಲ, ಆ. 16: ದೇರಳಕಟ್ಟೆಯ ಆಸ್ಪತ್ರೆ ಬಳಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳ ಗುಂಪೊಂದು ಗಾಜುಗಳನ್ನು ಹೊಡೆದು ಹಾನಿ ಮಾಡಿ ಪರಾರಿಯಾದ ಘಟನೆ ನಡೆದಿದ್ದು, ಇದರಿಂದ ಕಾರಿನಲ್ಲಿ ಕುಳಿತಿದ್ದ ರೋಗಿಯ ಸಂಬಂಧಿಯೋರ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಗಾಯಗೊಂಡವರನ್ನು ಘಾಲಿಬ್ ಹುಸೈನ್ ಎಂದು ಗುರುತಿಸಲಾಗಿದೆ.

ವಾಹನಗಳನ್ನು ಪಾರ್ಕಿಂಗ್ ಮಾಡಲು ಆಸ್ಪತ್ರೆಯ ವಠಾರದಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಸಮೀಪದ ಖಾಸಗಿ ಸ್ಥಳವನ್ನು ಬಾಡಿಗೆಗೆ ಪಡೆಯಲಾಗಿದ್ದು, ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ, ಕಾರಿನ ಬಳಿ ಮುಖಕ್ಕೆ ಬಟ್ಟೆ ಕಟ್ಟಿದ್ದ ಸ್ಥಿತಿಯಲ್ಲಿ ಬಂದ ದುಷ್ಕರ್ಮಿಗಳ ತಂಡ ಎಂಟು ಕಾರುಗಳ ಗಾಜು ಒಡೆದು, ವಾಹನಗಳಿಗೂ ಹಾನಿ ಮಾಡಿದೆ.

ಐದು ಕಾರುಗಳು ರೋಗಿಗಳ ಸಂಬಂಧಿಕರಿಗೆ ಸೇರಿದ್ದಾಗಿದ್ದು,  ಮೂರು ಕಾರುಗಳು ಆಸ್ಪತ್ರೆಯ ವೈದ್ಯರುಗಳದ್ದು ಎಂದು ತಿಳಿದು ಬಂದಿದೆ. ಈ ಕುರಿತು ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News