ಉಡುಪಿ: ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

Update: 2017-08-16 14:49 GMT

ಉಡುಪಿ, ಆ.16: ಭಾರತೀಯ ನಾಗರೀಕ ಸೇವಾ ಪರೀಕ್ಷೆ (ಯುಪಿಎಸ್‌ಸಿ) ಹಾಗೂ ಕರ್ನಾಟಕ ಸೇವಾ ಪರೀಕ್ಷೆ (ಕೆಪಿಎಸ್‌ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅ್ಯರ್ಥಿಗಳಿಗೆ ಉಡುಪಿಯ ಜಿಲ್ಲಾಡಳಿತದ ವತಿಯಿಂದ ಗುಣಮಟ್ಟದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಅರ್ಹತೆ: ಕೊನೆಯ ವರ್ಷದ ಪದವಿಯಲ್ಲಿ (ಯಾವುದೇ ಡಿಗ್ರಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು ಉದ್ಯೋಗದಲ್ಲಿರುವ/ ನಿರುದ್ಯೋಗಿ/ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲು ಅರ್ಹರಿರುವರು.

ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯವನ್ನು ತರಬೇತಿ ಕೇಂದ್ರವಾಗಿರಿ ಸಿಕೊಂಡು ನಿಗದಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕ ಗಳು, ಅಂತರ್ಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆ ಇತ್ಯಾದಿ ಮೂಲ ಸೌಕರ್ಯ ಹಾಗೂ ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಈ ಸೌಲಭ್ಯ ಗಳನ್ನು ಉಪಯೋಗಿಸಿಕೊಂಡು ಯುಪಿಎಸ್‌ಸಿ/ಕೆಪಿಎಸ್‌ಸಿ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ.

ಇದಕ್ಕಾಗಿ ಆಸಕ್ತru ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು -www.udupi.nic.in  -ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಛೇರಿ ಸಂಕೀರ್ಣ, ರಜತಾದ್ರಿ ಬಿ-302 ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆ.24ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News