​ಆ.20ರಂದು ವಿಕಲಚೇತನರ ಸಮ್ಮೇಳನ

Update: 2017-08-16 15:09 GMT

ಕುಂದಾಪುರ, ಆ.16: ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಎಂಡೋಸಲ್ಫಾನ್ ಸಂತ್ರಸ್ತ ವಿಕಲಚೇತನ ಹಾಗೂ ಇತರ ಎಲ್ಲಾ ವಿಧದ ವಿಕಲಚೇತನರ ಮತ್ತು ಪಾಲಕರ ಉಡುಪಿ ಜಿಲ್ಲಾ ಸಮ್ಮೇಳನವು ಆ.20ರಂದು ಬೆಳಿಗ್ಗೆ 10 ಗಂಟೆಗೆ ಕುಂದಾಪುರ ಕಾರ್ಮಿಕ ಭವನದಲ್ಲಿ ನಡೆಯಲಿದೆ.

ಸಮ್ಮೇಳನವನ್ನು ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಎನ್.ನಾಗರಾಜ್ ಬೆಂಗಳೂರು ಉದ್ಘಾಟಿಸಲಿರುವರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಂಗಪ್ಪದಾಸರ್ ಮತ್ತು ಜಂಟಿ ಕಾರ್ಯದರ್ಶಿ ಜಿ.ಎನ್.ಯಶಸ್ವಿ ಅತಿಥಿಗಳಾಗಿ ಭಾಗವಹಿಸ ಲಿರುವರು ಎಂದು ಒಕ್ಕೂಟದ ಜಿಲ್ಲಾ ಸಮಿತಿಯ ಗೌರವ ಅಧ್ಯಕ್ಷ ವೆಂಕಟೇಶ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News