ಬಂಟಕಲ್: ಸ್ವಾತಂತ್ರ್ಯೋತ್ಸವ ಆಚರಣೆ

Update: 2017-08-16 15:33 GMT

ಶಿರ್ವ, ಆ.16: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ 71ನೆ ಸ್ವಾಂತತ್ರ್ಯ ದಿನವನ್ನು ಆಚರಿಸಲಾಯಿತು.

ವೃತ್ತ ಶಿಕ್ಷಕ ಕೃಷ್ಣಕುಮಾರ್ ರಾವ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ.ತಿರುಮಲೇಶ್ವರ ಭಟ್, ಸೋದೆ ಮಠ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರಾಘವೇಂದ್ರ ತಂತ್ರಿ ಉಪಸ್ಥಿತರಿದ್ದರು. ಗಣಕಯಂತ್ರ ವಿಭಾಗದ ಶೈನಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News