ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

Update: 2017-08-16 17:09 GMT

ನೆಲ್ಯಾಡಿ, ಆ. 16: ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮಾ ಮಸಿದಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹನ ಹಾಗು ಸಭಾ ಕಾರ್ಯಕ್ರಮ ನಡೆಯಿತು.

ಪಡುಬೆಟ್ಟು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ  ಎಂ.ಡಿ. ಮಜೀದ್ ಅಲಿ  ಧ್ವಜಾರೋಹಣ ನೆರವೇರಿಸಿದರು. ಬಳಿಕ ನೂರುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷ  ಹಾಜಿ ಯು. ಉಮರಬ್ಬ ಅಧ್ಯಕ್ಷತೆ ವಹಿಸಿದರು.

ಖತೀಬ್ ಉಸ್ತಾದ್ ದುವಾ ನೆರವೇರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಡುಬೆಟ್ಟು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ  ಎಂ.ಡಿ. ಮಜೀದ್ ಅಲಿ  ಸಂದೇಶ ಭಾಷಣ ಮಾಡಿದರು. ನೂರುಲ್ ಹುದಾ ಮದ್ರಸದ ವಿದ್ಯಾರ್ಥಿಗಳಾದ ಜುನೈದ್ ಹಾಗು ಸಾಬಿತ್‌  ಸ್ವಾತಂತ್ರ್ಯೋತ್ಸವ ದಿನಾಚರಣೆಯ ಬಗ್ಗೆ ಭಾಷಣ ಮಾಡಿದರು.

ಈ ಸಂದರ್ಭ  ನೆಲ್ಯಾಡಿ ಗ್ರಾ.ಪಂ. ಸದಸ್ಯರಾದ ಶೇಕ್ ಶಬ್ಬೀರ್ ಸಾಹೇಬ್, ಅಲ್-ಇಖ್ವಾನ್ ಕಮಿಟಿಯ ಅಧ್ಯಕ್ಷ  ದಾವೂದ್ ಬಿಲಾಲ್, ಸದರ್ ಮುಅಲ್ಲಿಂ ಅಬ್ದುಲ್ ಅಝೀರ್ ಮುಸ್ಲಿಯಾರ್ ಉಪಸ್ಥಿತರಿದ್ದರು.

ಅಲ್-ಇಖ್ವಾನ್ ಕಮಿಟಿಯ ಕಾರ್ಯದರ್ಶಿ ಸಮೀರುದ್ದೀನ್ ಪಡುಬೆಟ್ಟು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News