ಗಂಗೊಳ್ಳಿ: ಬೋಟಿನಿಂದ ಬಿದ್ದ ಮೀನುಗಾರನ ಮೃತದೇಹ ಪತ್ತೆ

Update: 2017-08-17 07:24 GMT

ಗಂಗೊಳ್ಳಿ, ಆ.17: ನಿನ್ನೆ ರಾತ್ರಿ ಪಂಚ ಗಂಗಾವಳಿ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟಿನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಬೆಳಗ್ಗೆ ಗಂಗೊಳ್ಳಿ ಬಂದರಿನಲ್ಲಿ ಪತ್ತೆಯಾಗಿದೆ.

ಮೃತರನ್ನು ಇಲ್ಲಿನ ಗುಡ್ಡೆಯಂಗಡಿ ನಿವಾಸಿ ಸುರೇಶ್ ಮೊಗವೀರ(56) ಎಂದು ಗುರುತಿಸಲಾಗಿದೆ. ಮೀನುಗಾರಿಕೆಗೆ ತೆರಳಿದ್ದ ಇವರು ನಿನ್ನೆ ರಾತ್ರಿ ಆಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು. ಅವರ ಮೃತದೇಹ ಇಂದು ಬೆಳಗ್ಗೆ ನದಿ ತೀರದಲ್ಲಿ ಪತ್ತೆಯಾಗಿದೆ.

24x7 ಗಂಗೊಳ್ಳಿ ಸ್ವಯಂಸೇವಕರು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಮೃತದೇಹವನ್ನು ಮೇಲೆತ್ತಲಾಗಿದ್ದು, ಸದ್ಯ ಕುಂದಾಪುರ ಶವಾಗಾರದಲ್ಲಿರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News