ಈ ಬಾರಿ ದಸರಾ ಉದ್ಘಾಟನೆಗೆ ಕವಿ ನಿಸಾರ್ ಅಹ್ಮದ್

Update: 2017-08-17 15:54 GMT

 ಮೈಸೂರು, ಆ.17: ಈ ಬಾರಿಯ ದಸರಾ ಉದ್ಘಾಟನೆಯನ್ನು ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹ್ಮದ್ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ನಡೆಯಲಿರುವ ಸಾಂಪ್ರದಾಯಿಕ ದಸರಾ ಉತ್ಸವವನ್ನು ಕವಿ ಪ್ರೊ.ನಿಸಾರ್‌ಅಹ್ಮದ್ ಉದ್ಘಾಟಿಸಬೇಕೆಂದು ದಸರಾ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ನಿಸಾರ್ ಅಹ್ಮದ್‌ರ ಜೊತೆ ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು. ಶೀಘ್ರದಲ್ಲೇ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News