ಅಕ್ರಮ ಗಾಂಜಾ: ಓರ್ವನ ಬಂಧನ

Update: 2017-08-18 12:51 GMT

ಉಡುಪಿ, ಆ.18: ಅಕ್ರಮ ಗಾಂಜಾ ದಾಸ್ತಾನು ಇರಿಸಿದ್ದ ಆರೋಪಿಯೊಬ್ಬನನ್ನು ಉಡುಪಿ ಡಿಸಿಐಬಿ ಪೊಲೀಸರು ಉಡುಪಿ ಪೆರಂಪಳ್ಳಿ ರೈಲ್ವೆ ಸೇತುವೆ ಬಳಿ ಬಂಧಿಸಿದ್ದಾರೆ.

ಬಂಧಿತನನ್ನು ಉಡುಪಿಯ ಗುಂಡಿಬೈಲು ಶಾಲೆಯ ಬಳಿ ನಿವಾಸಿ ಕೌಶಿಕ್ (19) ಎಂದು ಗುರುತಿಸಲಾಗಿದೆ. ಈತನಿಂದ 13 ಸಾವಿರ ರೂ. ಮೌಲ್ಯದ 430 ಗ್ರಾಂ ತೂಕದ ಗಾಂಜಾ ಹಾಗೂ 5 ಸಾವಿರ ರೂ. ಮೌಲ್ಯದ ಮೊಬೈಲ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮಣಿಪಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಎಸ್ಪಿ ಡಾ.ಸಂಜೀವ ಪಾಟೀಲ್ ನಿರ್ದೇಶನದಲ್ಲಿ ಡಿವೈಎಸ್ಪಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಡಿಸಿಐಬಿ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್ ಹಾಗೂ ಎಎಸೈಗಳಾದ ರೊಸಾರಿಯೊ ಡಿಸೋಜ, ರವಿಚಂದ್ರ, ಸಿಬ್ಬಂದಿಗಳಾದ ಸುರೇಶ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಸಂತೋಷ್ ಕುಂದರ್, ರಾಜ್‌ಕುಮಾರ್, ದಯಾ ನಂದ ಪ್ರಭು, ಪ್ರವೀಣ್, ಶಿವಾನಂದ, ಚಾಲಕ ರಾಘವೇಂದ್ರ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News