ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತ: ಸಾವಿನ ಸಂಖ್ಯೆ 23ಕ್ಕೇರಿಕೆ

Update: 2017-08-19 16:40 GMT

ಹೊಸದಿಲ್ಲಿ, ಆ,19: ಪುರಿ-ಹರಿದ್ವಾರ್-ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ನ 6 ಬೋಗಿಗಳು ಹಳಿತಪ್ಪಿದ ಘಟನೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 23ಕ್ಕೇರಿದೆ. ಈ ಘಟನೆಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರೆಷ್ಟು ಎನ್ನುವುದು ಇನ್ನೂ ಖಚಿತಗೊಂಡಿಲ್ಲ ಎನ್ನಲಾಗಿದೆ.

ಘಟನೆಯಲ್ಲಿ 23 ಮಂದಿ ಮೃತಪಟ್ಟು 40 ಮಂದಿ ಗಾಯಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News