ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆಗೆ ಸನ್ಮಾನ

Update: 2017-08-19 17:07 GMT

ಮೂಡುಬಿದಿರೆ, ಆ. 19: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಭೋಜರಾಜ ಹೆಗ್ಡೆ (94) ಅವರನ್ನು ಮೂಡುಬಿದಿರೆ ರೋಟರಿ ಕ್ಲಬ್ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಮೂಡುಬಿದಿರೆ ರೋಟರಿ ಕ್ಲಬ್ ಸುವರ್ಣ ಮಹೋತ್ಸವದ ನೆನಪಿಗಾಗಿ ಸ್ವಾತಂತ್ರ್ಯೋತ್ಸವ ದಿನದಂದು ವೇಣೂರಿನ ಬಾಹುಬಲಿ ಬೆಟ್ಟದಲ್ಲಿ ಪಡಂಗಡಿ ಭೋಜರಾಜ ಹೆಗ್ಡೆಯವರಿಗೆ ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ ಕಾಮತ್ ಅವರು ಶಾಲು ಹೊದಿಸಿ, ಫಲಪುಷ್ಪವನ್ನಿತ್ತು ಗೌರವಿಸಿದರು.

ರೋಟರಿ ಕ್ಲಬ್ ಪದಾಧಿಕಾರಿಗಳಾದ ಸಿ.ಎಚ್. ಅಬ್ದುಲ್ ಗಫೂರ್ ಮತ್ತು ಕಜಂಗೆ ಸುದರ್ಶನ್ ಜೈನ್, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News