ಹಾವು ಕಚ್ಚಿ ರೈತ ಮೃತ್ಯು

Update: 2017-08-19 17:16 GMT

ಮದ್ದೂರು, ಆ.9: ಪಟ್ಟಣದ ಹೊರವಲಯದ ಜಮೀನಿನಲ್ಲಿ ಜೋಳದ ಕಡ್ಡಿ ಕೊಯ್ಯುತ್ತಿದ್ದ ರೈತ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಪಟ್ಟಣದ ಸೋಮೇಗೌಡರ ಬೀದಿಯ ಮಾಯಪ್ಪ ಅವರ ಪುತ್ರ ಮಾದು(55) ಸಾವನ್ನಪ್ಪಿದ ರೈತನಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು.
ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News