ಬೆಂಗಳೂರು: ಸಿಐಡಿ ಮುಖ್ಯಪೇದೆ ಸಾವು
Update: 2017-08-20 14:51 GMT
ಬೆಂಗಳೂರು, ಆ.20: ಶರವೇಗದಲ್ಲಿ ಸಾಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಸಿಐಡಿ ಮುಖ್ಯಪೇದೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಿಐಡಿ ಮುಖ್ಯಪೇದೆಯಾಗಿದ್ದ ಗೋವಿಂದರಾಜು(55) ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಗೋವಿಂದರಾಜು ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಹೆಸರುಘಟ್ಟ ಮುಖ್ಯರಸ್ತೆ ಹುರುಳಿಚಿಕ್ಕನಹಳ್ಳಿ ಬಳಿ ಬೈಕ್ ನಿಯಂತ್ರಣ ತಪ್ಪಿ ಗೋವಿದಂರಾಜು ಕೆಳಕ್ಕೆ ಉರುಳಿ ಬಿದ್ದು, ಅವರ ತಲೆಗೆ ತೀವ್ರ ಗಾಯವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಜಾಲಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.