ಕಂದುಕದ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ

Update: 2017-08-20 17:35 GMT

ಮಂಗಳೂರು, ಆ. 21: ನಗರದ ಬದ್ರಿಯಾ ರಸ್ತೆಯ ಕಂದುಕದ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ  ಸ್ವಾತಂತ್ರ್ಯೋತ್ಸವ ಪೋರ್ಟ್ ವಾರ್ಡ್‌ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಡ ಕುಟುಂಬಸ್ಥರಿಗೆ ಹೊಲಿಗೆ ಯಂತ್ರ, ಮಹಿಳೆಯರಿಗೆ ಸೀರೆ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ನಡೆದವು.

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾದ ಅನನ್ಯ ಅಮೀನ್, ಸೋನಿತ್ ಮೆಂಡನ್, ಆಶಿಶ್,ಅಕ್ಶಾ ಅವರನ್ನು ಸನ್ಮಾನಿಸಲಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಾದ ಮುಹಮ್ಮದ್ ಸಜ್ಜಾದ್, ಶಂಶಾದ್ ಬೇಗಂ, ಹರ್ಷಿತಾ, ಸುರಕ್ಷಾ ಎಸ್.ಬೋಳಾರ, ರಾಹುಲ್ ಪುತ್ರನ್ ಹೊಯಿಗೆ ಬಝಾರ್ ಇವರನ್ನು ಸನ್ಮಾನಿಸಲಾಯಿತು. ಅಲ್ಲದೆ ಇದೇ ಸಂದರ್ಭದಲ್ಲಿ ಬಡವರಿಗೆ ಹೊಲಿಗೆ ಯಂತ್ರ ಮತ್ತು ಮಹಿಳೆಯರಿಗೆ ಸೀರೆಗಳನ್ನು ವಿತರಿಸಲಾಯಿತು.

ರಾಜ್ಯದ ಸರಕಾರದಿಂದ ತುಳು ಅಕಾಡೆಮಿಯ ಸದಸ್ಯರಾಗಿ ಆಯ್ಕೆಗೊಂಡ ಪಾಂಡೇಶ್ವರದ ಎ.ಶಿವಾನಂದ ಕರ್ಕೇರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನಪಾ ಉಪಮೇಯರ್ ರಜನೀಶ್ ಕಾಪಿಕಾಡ್, ಕಾರ್ಪೊರೇಟರ್ ಅಬ್ದುಲ್ ಲತೀಫ್ ಕಂದಕ್, ಬದ್ರಿಯಾ ಕಾಲೇಜಿನ ಪ್ರಾಂಶುಪಾಲ ಎನ್.ಇಸ್ಮಾಯೀಲ್, ಮಂಗಳೂರು ತಾಲೂಕಿನ ತಹಶೀಲ್ದಾರ ಸಿ.ಮಹದೇವಯ್ಯ, ವಿಶ್ವವಿದ್ಯಾನಿಲಯದ ಕುಲಸಚಿವ ಎ.ಎಂ.ಖಾನ್, ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ ಕಾಮತ್, ರಾಜ್ಯ ಅಂಗವಿಕಲ ನೌಕರರ ಸಂಘದ ಕಾರ್ಯದರ್ಶಿ ಹರೀಶ್ ಶೆಟ್ಟಿ, ಕೇಶವ ಪಾಂಡೇಶ್ವರ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News