ಮದ್ಯ ಮಾರಾಟ: ಇಬ್ಬರು ಆರೋಪಿಗಳ ಬಂಧನ

Update: 2017-08-21 11:42 GMT

ಚಿಕ್ಕಮಗಳೂರು, ಆ.21: ಅಕ್ರಮ ಮದ್ಯ ಮಾರಾಟ ಸಂಬಂಧ ಚಿಕ್ಕಮಗಳೂರು ಡಿಸಿಐಬಿ, ಬಾಳೆಹೊನ್ನೂರು, ಸಖರಾಯಪಟ್ಟಣ ಪೊಲೀಸ್ ಠಾಣೆಗಳ ವ್ಯಾಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಮಗಳೂರು ಡಿಸಿಐಬಿ ಪೊಲೀಸರು ಮಲ್ಲಂದೂರು ರಸ್ತೆಯ ಅಲ್ ಬದ್ರಿಯಾ ಆಟೋ ನಿಲ್ದಾಣದ ಬಳಿ ಅಕ್ರಮ ಮದ್ಯ ಮಾರುತತಿದ್ದ ಆರೋಪಿ ಶಂಕರಪುರ ಬಡಾವಣೆಯ ವೆಂಕಟೇಶ್(34) ಎಂಬಾತನನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ 1350 ರೂ.ಗಳ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಾಗುಂಡಿ ಎಂಬಲ್ಲಿ ಅಕ್ರಮ ಮದ್ಯ ಮಾರುತ್ತಿದ್ದ ಆರೋಪಿ ರಾಜು(43) ಎಂಬಾತನನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ 1772 ರೂ.ಗಳ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

 ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ದೇಬೋರನಹಳ್ಳಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಕೊಂಡೊಯ್ದು ಅಜ್ಜಪ್ಪ ತಡಬನಹಳ್ಳಿ(54) ಎಂಬಾತ ಅಕ್ರಮ ಮದ್ಯ ಮಾರುತ್ತಿದ್ದ. ಈ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರನ್ನು ಕಂಡು ಆರೋಪಿ ಓಡಿ ತಪ್ಪಿಸಿಕೊಂಡಿದ್ದಾನೆ. ಆರೋಪಿ ಬಿಟ್ಟು ಹೋಗಿದ್ದ 2212 ರೂ.ಗಳ ಮೌಲ್ಯದ ಅಕ್ರಮ ಮದ್ಯ ಸಹಿತ ಬೈಕನ್ನು ವಶಪಡಿಸಿಕೊಂಡಿರುವ ಪೊಲಿಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News