×
Ad

ಮಂಗಳೂರು: ಬಿಜೆಪಿ ಮಹಿಳಾಮೋರ್ಚಾ ಧರಣಿ

Update: 2017-08-21 23:15 IST

ಮಂಗಳೂರು, ಆ.21: ಕೊಡಗಿನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮವೊಂದರಲ್ಲಿ ರಾಜ್ಯ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೊಂದಿಗೆ ಅಸಭ್ಯವಾಗಿ ವರ್ತಿಸಿರುವುದನ್ನು ಖಂಡಿಸಿ ಬಿಜೆಪಿ ದ.ಕ.ಜಿಲ್ಲಾ ಮಹಿಳಾ ಮೋರ್ಚಾ ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿತು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಜಿಲ್ಲಾಧ್ಯಕ್ಷೆ ಪೂಜಾ ಪೈ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಪ್ರಭಾ ಮಾಲಿನಿ, ಕಾತ್ಯಾಯಿನಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪದಾಧಿಕಾರಿಗಳಾದ ಬ್ರಿಜೇಶ್ ಚೌಟ, ಕಿಶೋರ್ ರೈಘಿ, ಸಂಜಯ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News