ಮೀಟರ್ ಬಡ್ಡಿ ದಂಧೆ: ಆರೋಪಿ ಬಂಧನ

Update: 2017-08-22 12:44 GMT

 ಬೆಂಗಳೂರು, ಆ.22: ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ಖಾಲಿ ಚೆಕ್‌ಗಳು ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಮಹಾಲಕ್ಷ್ಮೀ ಲೇಔಟ್‌ನ ಮುನೇಶ್ವರ ಬ್ಲಾಕ್‌ನ ಗಿರೀಶ್ ಯಾನೆ ಲೇಔಟ್ ಗುಂಡ(40) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿಯು ಪರವಾನಿಗೆ ಇಲ್ಲದೆ ಮುನೇಶ್ವರ ಬ್ಲಾಕ್‌ನ 2ನೆ ಕ್ರಾಸ್‌ನಲ್ಲಿ ಕಚೇರಿ ತೆರೆದು ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News