ತ್ರಿವಳಿ ತಲಾಖ್ ; ಐತಿಹಾಸಿಕ ತೀರ್ಪು ಸ್ವಾಗತಾರ್ಹ: ಯಡಿಯೂರಪ್ಪ

Update: 2017-08-22 14:05 GMT

ಬೆಂಗಳೂರು, ಆ.22: ತ್ರಿವಳಿ ತಲಾಖ್ಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ಐದು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ತೀರ್ಪಿನ ಮೂಲಕ ಲಕ್ಷಾಂತರ ಮುಸ್ಲಿಮ್ ಮಹಿಳೆಯರ ನ್ಯಾಯಯುತ ಮೂಲಭೂತ ಹಕ್ಕು, ಸ್ವಾಭಿಮಾನ ಮತ್ತು ಸಮಾನತೆಯನ್ನು ಎತ್ತಿ ಹಿಡಿದಂತಾಗಿದೆ. ಶೋಷಣೆ ವಿರುದ್ಧ ಮಹಿಳಾ ಸಬಲೀಕರಣದ ವಾದಕ್ಕೆ ಜಯ ದೊರಕಿದೆ ಎಂದು ಅವರು ಪ್ರಕಟನೆಯಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News