ವಿದ್ಯಾರ್ಥಿಗಳೊಂದಿಗೆ ಪ್ರೇರಣಾ ಸಂವಾದ
Update: 2017-08-22 14:57 GMT
ಉಡುಪಿ, ಆ.22: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನಿರ್ದೇಶನದಂತೆ ತಿಂಗಳ ಒಂದು ಮಂಗಳವಾರ ‘ಪ್ರೇರಣಾ’ ಕಾರ್ಯಕ್ರಮವನ್ನು ಸಂಘಟಿಸಲಾಗುತಿದ್ದು, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ. ಅವರು ಗುಂಡ್ಮಿ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯ ಮಕ್ಕಳೊಂದಿಗೆ ನಡೆಸಿಕೊಟ್ಟರು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಾಧಾನ್ಯತೆ ಕೊಡುವ ಉದ್ದೇಶವನ್ನು ಹೊಂದಿರುವ ಈ ಕಾರ್ಯಕ್ರಮ, ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಹೆಣ್ಣುಮಕ್ಕಳು ಹತ್ತನೇ ತರಗತಿಯ ನಂತರ ಶಾಲೆಯನ್ನು ಬಿಡದಂತೆ ಪ್ರೇರೇಪಿಸುವುದಾಗಿದೆ.
ಗುಂಡ್ಮಿ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಶಿಲ್ಪಾ, ಆಶ್ಲೇಖಾ, ಮುಶ್ರಿಪಾ ನಾಜ್, ಪಾಹಿನ್, ಪ್ರಿಯಾ ಸಂವಾದ ನಡೆಸಿದರು.