ಭ್ರಷ್ಟಾಚಾರ ಆರೋಪಿ ಚುನಾವಣೆ ಸ್ಪರ್ಧಿಸುವಂತಿಲ್ಲ: ಸುಪ್ರೀಂ ಅಭಿಪ್ರಾಯದ ಕುರಿತು ಪ್ರತಿಕ್ರಿಯೆಗೆ ಸೂಚನೆ

Update: 2017-08-22 16:37 GMT

ಹೊಸದಿಲ್ಲಿ, ಆ.22: ಓರ್ವ ಅಭ್ಯರ್ಥಿಯ ವಿರುದ್ಧ ಭ್ರಷ್ಟಾಚಾರದ ಆರೋಪ ರೂಪಿಸಿದ ದಿನದಿಂದಲೇ ಆತನನ್ನು ಚುನಾವಣೆಗೆ ಸ್ಪರ್ಧಿಸುವುದನ್ನು ನಿಷೇಧಿಸಬೇಕು ಎಂಬ ಸುಪ್ರೀಂಕೋರ್ಟ್‌ನ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಂಸದೀಯ ಸಮಿತಿ ವಿವಿಧ ರಾಜಕೀಯ ಪಕ್ಷಗಳಿಗೆ ಸೂಚಿಸಿದೆ.

    ಸುಪ್ರೀಂಕೋರ್ಟ್‌ನ ಅಭಿಪ್ರಾಯ ಜಾರಿಗೊಂಡರೆ ಅಧಿಕಾರರೂಢ ಪಕ್ಷ ಇದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ . ಈ ಬಗ್ಗೆ ಪ್ರತಿಕ್ರಿಯೆ ನೀಡಿ ಎಂದು ಸಿಬ್ಬಂದಿ ಮತ್ತು ಕಾನೂನು ಕುರಿತಾದ ಸಂಸದೀಯ ಸ್ಥಾಯೀ ಸಮಿತಿ ರಾಜಕೀಯ ಪಕ್ಷಗಳಿಗೆ ಕಳಿಸಿದ ಇ-ಮೇಲ್ ಸಂದೇಶದಲ್ಲಿ ತಿಳಿಸಿದೆ. ಪ್ರಸ್ತುತ ಇರುವ ನಿಯಮದ ಪ್ರಕಾರ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News