ಎಸ್‌ಸಿ, ಎಸ್‌ಟಿ ಗ್ರಾಪಂ ಸದಸ್ಯರಿಗೆ ತರಬೇತಿ ಕಾರ್ಯಾಗಾರ

Update: 2017-08-23 16:42 GMT

ಉಡುಪಿ, ಆ.23: ಜಿಲ್ಲಾಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ ಉಡುಪಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಚುನಾಯಿತ ಗ್ರಾಪಂ ಸದಸ್ಯರಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಉಡುಪಿ ತಾಪಂ ಅಧ್ಯಕ್ಷರಾದ ನಳಿನಿ ಪ್ರದೀಪ್ ರಾವ್ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಉಡುಪಿಯ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ವಹಿಸಿದ್ದು, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯ ಅನುಷ್ಠಾನದ ಬಗ್ಗೆ ಮಾತನಾಡಿದರು. ಅತಿಥಿಗಳಾಗಿ ತಾಪಂ ಉಪಾದ್ಯಕ್ಷ ಪಿ.ರಾಜೇಂದ್ರ, ಉಡುಪಿ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ, ಉಡುಪಿ ತಾಪಂ ಲೆಕ್ಕಾಧಿಕಾರಿ ಸಂಜೀವ ಮರಕಾಲ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾ ಉಡುಪಿ ವೈಕುಂಠ ಬಾಳಿಗಾ ಕಾಲೇಜ್ ಆಪ್ ಲಾದ ಉಪನ್ಯಾಸಕ ಬಿ.ಜಿ.ಶಂಕರಮೂರ್ತಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇದರ ಯೋಜನಾ ನಿರ್ದೇಶಕ ಪ್ರಭಾಕರ ಆಚಾರ್ ಕಾರ್ಯಕ್ರಮ ನಿರೂಪಿಸಿದರು. 1ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಾಮಮೂರ್ತಿ ಎಸ್.ಎಸ್ ಸ್ವಾಗತಿಸಿ, 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್ ಕೆ.ಎಚ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News