ಪಲಿಮಾರು ಮಠ ಪರ್ಯಾಯ: ರವಿವಾರ ಕಟ್ಟಿಗೆ ಮುಹೂರ್ತ

Update: 2017-08-24 16:03 GMT

ಉಡುಪಿ, ಆ.24: 2018ರ ಜನವರಿ 18ರಂದು ನಡೆಯುವ ಪರ್ಯಾಯ ಮಹೋತ್ಸವದಲ್ಲಿ ಎರಡನೇ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳಲ್ಲಿ ಮೂರನೇಯದಾದ ಕಟ್ಟಿಗೆ ಮುಹೂರ್ತ ಆ. 27ರಂದು ಬೆಳಗ್ಗೆ 8:45ಕ್ಕೆ ನಡೆಯಲಿದೆ.

ಪರ್ಯಾಯ ನಡೆಯುವ ಒಂದು ವರ್ಷ ಮೊದಲೇ ಆರಂಭಗೊಳ್ಳುವ ಪೂರ್ವಭಾವಿ ಸಿದ್ಧತೆಗಳಲ್ಲಿ ಕಟ್ಟಿಗೆ ಮುಹೂರ್ತ ಮೂರನೇಯದು. ಇದಕ್ಕೆ ಮೊದಲು ಬಾಳೆ ಮುಹೂರ್ತ ಹಾಗೂ ಅಕ್ಕಿ ಮುಹೂರ್ತ ನಡೆದಿದ್ದು, ಪರ್ಯಾಯಕ್ಕೆ ಸುಮಾರು ಒಂದು ತಿಂಗಳು ಮೊದಲು ಕೊನೆಯದಾದ ಭತ್ತ ಮುಹೂರ್ತ ನಡೆಯಲಿವೆ.

ಧ್ವೈತ ಮತದ ಸ್ಥಾಪಕ  ಶ್ರೀ ಮಧ್ವಾಚಾರ್ಯರಿಂದ ಸ್ಥಾಪನೆಗೊಂಡು 800 ವರ್ಷಗಳ ಇತಿಹಾಸವಿರುವ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳ ಪರ್ಯಾಯ ಆರಂಭಗೊಂಡಿದ್ದು 1552ರಲ್ಲಿ ಸೋದೆ ಮಠದ ಶ್ರೀವಾದಿರಾಜ ತೀರ್ಥರಿಂದ. ಇದಕ್ಕೆ ಮೊದಲು ಮಧ್ವಾಚಾರ್ಯರು ಶ್ರೀಕೃಷ್ಣನ ಪೂಜೆಗಾಗಿ ಎಂಟು ಮಠಗಳನ್ನು ಸ್ಥಾಪಿಸಿ ಪ್ರತಿ ಮಠಾಧೀಶರಿಗೂ ಎರಡು ತಿಂಗಳ ಅವಧಿಯ ಸರತಿ ಪೂಜೆ ವ್ಯವಸ್ಥೆ ಕಲ್ಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News