ನಾರಾಯಣಪ್ಪ

Update: 2017-08-27 17:30 GMT

ಚಿಕ್ಕಬಳ್ಳಾಪುರ,ಆ.27: ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾರಾಯಣಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೋಲಾರ ತಾಲೂಕಿನ ಪುರಹಳ್ಳಿ ಮೂಲದವರಾದ ನಾರಾಯಣಪ್ಪ ಕಳೆದ 20 ದಿನಗಳಿಂದ ಅನಾರೋಗ್ಯ ನಿಮಿತ್ತ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಾನಾ ತಾಲೂಕುಗಳ ಠಾಣೆಯಲ್ಲಿ ಕೆಲಸ ನಿರ್ವಹಿಸಿದ್ದ ನಾರಾಯಣಪ್ಪ, ಜಿಲ್ಲಾ ಕೇಂದ್ರದ ಅಪರಾಧ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹಲವು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದರು.

ಜನಸ್ನೇಹಿಯಾಗಿದ್ದ ನಾರಾಯಣಪ್ಪ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಗರದ ಅಪಾರ ಗೆಳೆಯರನ್ನು ಅಗಲಿದ್ದಾರೆ. ನಾರಾಯಣಪ್ಪ ಅವರ ನಿಧನಕ್ಕೆ ಜಿಲ್ಲಾ ವರಿಷ್ಟಾಧಿಕಾರಿ ಕಾರ್ತಿಕ್‍ರೆಡ್ಡಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಹದ್ಯೋಗಿಗಳು, ನಗರದ ನಾನಾ ಜನಪರ ಸಂಘಟನೆಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ