ಕಮರುದ್ದೀನ್ ಸಾಹೇಬ್
Update: 2017-09-02 04:33 GMT
ಉಡುಪಿ, ಸೆ.2: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ನ ಮಾಜಿ ಅಧ್ಯಕ್ಷ ಹಾಗೂ ಉಡುಪಿ ಕೇಂದ್ರ ಜಾಮಿಯಾ ಮಸೀದಿಯ ಮಾಜಿ ಕಾರ್ಯದರ್ಶಿ ಕಮರುದ್ದೀನ್ ಸಾಹೇಬ್ ಮೈಸೂರಿನಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.