×
Ad

ಸೆ.5: ತ್ರಿವಳಿ ತಲಾಕ್-ಶರೀಅತ್ ಸಂರಕ್ಷಣಾ ಆಂದೋಲನ

Update: 2017-09-03 19:42 IST

ಮಂಗಳೂರು, ಸೆ.3: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಇದರ ವತಿಯಿಂದ ತ್ರಿವಳಿ ತಲಾಕ್-ಶರೀಅತ್ ಸಂರಕ್ಷಣಾ ಆಂದೋಲನಾ ಕಾರ್ಯಕ್ರಮವು ಸೆ. 5ರಂದು ಬೆಳಗ್ಗೆ 10ಕ್ಕೆ ನಗರದ ಜ್ಯೋತಿ ಸಮೀಪದ ಡಾನ್ ಬಾಸ್ಕೋ ಹಾಲಿನಲ್ಲಿ ನಡೆಯಲಿದೆ.

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ಅಧ್ಯಕ್ಷ ಸೈಯದ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಸ್ತ ಕೇಂದ್ರ ಮುಶಾವರದ ಉಪಾಧ್ಯಕ್ಷ ಶೈಖುನಾ ಕೆ.ಪಿ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ನ ಕಾರ್ಯದರ್ಶಿ ಶೈಖುನಾ ಎಂ.ಎ. ಖಾಸಿಮ್ ಮುಸ್ಲಿಯಾರ್ ಮೊಗ್ರಾಲ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ನ್ಯಾಯವಾದಿ ಮುಹಮ್ಮದ್ ಫೈಝಿ ಓಣಂಪಿಳ್ಳಿ ತ್ರಿವಳಿ ತಲಾಕ್ ಹಾಗೂ ಶರೀಅತ್ ಸಂರಕ್ಷಣೆಯ ಕುರಿತು ವಿಷಯ ಮಂಡನೆ ಮಾಡಲಿದ್ದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News