×
Ad

ರಾಜ್ಯ ಮಾಹಿತಿ ಆಯೋಗದ ನೂತನ ಆಯುಕ್ತ ಡಾ.ಸುಚೇತನ ಸ್ವರೂಪ ಪ್ರಮಾಣ ವಚನ ಸ್ವೀಕಾರ

Update: 2017-09-05 17:46 IST

ಬೆಂಗಳೂರು, ಸೆ. 5: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ನೇಮಕಗೊಂಡಿರುವ ಡಾ.ಸುಚೇತನ ಸ್ವರೂಪ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. 

ಮಂಗಳವಾರ ಇಲ್ಲಿನ ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು, ಡಾ.ಸುಚೇತನ ಸ್ವರೂಪ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಸುಭಾಶ್ ಚಂದ್ರ ಕುಂಟಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News