ಶಿವಮೊಗ್ಗ: ಸೆ.17 ರಂದು ವಿಶ್ವಕರ್ಮ ಜಯಂತಿ

Update: 2017-09-05 13:52 GMT

ಶಿವಮೊಗ್ಗ, ಸೆ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿಶ್ವಕರ್ಮ ಸಮಾಜ ಸಂಯುಕ್ತಾಶ್ರಯದಲ್ಲಿ ಸೆಪ್ಟಂಬರ್ 17ರಂದು ಬೆಳಗ್ಗೆ 11ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿಯನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ.

ಈ ಸಂಬಂಧ ಇಂದು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಜಯಂತಿ ಆಚರಣೆ ಸಂಬಂಧ ಸುಧೀರ್ಘ ಚರ್ಚಿಸಿ ರೂಪರೇಷೆಗಳನ್ನು ಸಿದ್ಧಪಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಹಾಗೂ ಸಂದರ್ಭೋಚಿತವಾಗಿ ಕಾರ್ಯಕ್ರಮದ ಔಚಿತ್ಯದ ಕುರಿತು ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲು ನಿರ್ಣಯ ಕೈಗೊಳ್ಳಲಾಯಿತು.

ಈ ಕಾರ್ಯಕ್ರಮದ ಯಶಸ್ವಿಸ ಸಾರ್ವಜನಿಕರು ಹಾಗೂ ವಿಶ್ವಕರ್ಮ ಸಮುದಾಯದ ಜನರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿಗಳು ಕೋರಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಮಂಗಳಾ ವೆಂ.ನಾಯಕ್, ವಿಶ್ವಕರ್ಮ ಸಮಾಜದ ನಿರಂಜನಮೂರ್ತಿ, ಡಿ.ಚಂದ್ರಶೇಖರ್, ಎನ್.ರಮೇಶ್, ಟಿ.ಆರ್.ಸತ್ಯನಾರಾಯಣ, ಎನ್.ಡಿ.ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News