ಗೌರಿ ಲಂಕೇಶ್ ಹತ್ಯೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಖಂಡನೆ

Update: 2017-09-06 07:04 GMT

ಹೊಸದಿಲ್ಲಿ, ಸೆ.6: ಪತ್ರಕರ್ತೆ, ಚಿಂತಕಿ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವೆ ಸ್ಮೃತಿ ಇರಾನಿ, ಪ್ರಕರಣದ ಶೀಘ್ರ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸುತ್ತೇನೆ. ತ್ವರಿತಗತಿಯ ವಿಚಾರಣೆ ನಡೆದು ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ” ಎಂದವರು ಟ್ವೀಟ್ ಮಾಡಿದ್ದಾರೆ,

“ಗೌರಿ ಲಂಕೇಶ್ ಅವರ ಹತ್ಯೆಯು ಭಯಾನಕ ಸುದ್ದಿಯಾಗಿದ್ದು, ಪತ್ರಕರ್ತರ ವಿರುದ್ಧ ಎಲ್ಲಾ ಹಿಂಸಾತ್ಮಕ ಕೃತ್ಯಗಳನ್ನು ನಾನು ಖಂಡಿಸುತ್ತೇನೆ” ಎಂದು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಟ್ವೀಟ್ ಮಾಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News