ಗೌರಿ ಅಮರ್ ರಹೇ...
Update: 2017-09-06 23:47 IST
ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅಂತ್ಯಕ್ರಿಯೆಯನ್ನು ನಗರದ ಚಾಮರಾಜಪೇಟೆಯಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಲ್ಲದೆ ಸಕಲ ಪೊಲೀಸ್ ಗೌರವಗಳೊಂದಿಗೆ ಅಂತಿಮ ಸಂಸ್ಕಾರವನ್ನು ನಡೆಸಲಾಯಿತು. ಪತ್ರಕರ್ತೆ ಗೌರಿ ಲಂಕೇಶ್ಗೆ ಯಾವುದೇ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಮೇಲೆ ಹೂಗಳನ್ನು ಇಟ್ಟು ಸರಳವಾಗಿ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಶಸ್ತ್ರ ಸಜ್ಜಿತ ಪೊಲೀಸರು ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಿದರು.ಮುಗಿಲು ಮುಟ್ಟಿದ ಘೋಷ ವಾಕ್ಯ: ಅಮರ್ ರಹೇ.. ಅಮರ್ ರಹೇ, ಗೌರಿ ಲಂಕೇಶ್ ಅಮರ್ ರಹೇ, ಜಿಂದಾಬಾದ್, ಜಿಂದಾಬಾದ್ ಗೌರಿ ಲಂಕೇಶ್ ಜಿಂದಾಬಾದ್ ಎನ್ನುವ ಘೋಷ ವಾಕ್ಯಗಳ ಮೂಲಕ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು ಹಾಗೂ ಲಂಕೇಶ್ ಪತ್ರಿಕಾ ಓದುಗರು ಗೌರಿ ಲಂಕೇಶ್ರಿಗೆ ಅಂತಿಮ ನಮನ ಸಲ್ಲಿಸಿದರು.