ಬಿಹಾರದಲ್ಲಿ ಪತ್ರಕರ್ತನಿಗೆ ಗುಂಡಿಕ್ಕಿದ ದುಷ್ಕರ್ಮಿಗಳು
Update: 2017-09-07 16:06 GMT
ಬಿಹಾರ, ಸೆ.7: ಇಲ್ಲಿನ ಅರ್ವಾಲ್ ಎಂಬಲ್ಲಿ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟೆನ ವರದಿಯಾಗಿದೆ.
ರಾಷ್ಟ್ರೀಯ ಸಹರಾ ಎಂಬ ಹಿಂದಿ ದಿನಪತ್ರಿಕೆಯ ಪತ್ರಕರ್ತ ಪಂಕಜ್ ಮಿಶ್ರಾ ಎಂಬವರ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಒಂದು ಲಕ್ಷ ರೂ.ಗಳನ್ನು ಬ್ಯಾಂಕ್ ನಿಂದ ವಿತ್ ಡ್ರಾ ಮಾಡಿ ಮಿಶ್ರಾ ಹೊರಬರುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ.
ಮಿಶ್ರಾ ಅವರ ಪರಿಸ್ಥಿತಿ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿ ಒಬ್ಬನನ್ನು ಬಂಧಿಸಲಾಗಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ.
ವೈಯಕ್ತಿಕ ದ್ವೇಷದಿಂದ ಈ ದಾಳಿ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.