×
Ad

ಕಡೂರು: ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪತ್ರಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Update: 2017-09-07 22:07 IST

ಕಡೂರು, ಸೆ.7: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಕಡೂರು ಮತ್ತು ಬೀರೂರಿನ ಪತ್ರಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಗುರುವಾರ ಪಟ್ಟಣದ ಪ್ರವಾಸಿಮಂದಿರದಿಂದ ಮೆರವಣಿಗೆ ನಡೆಸಿದ ಪತ್ರಕರ್ತರು ತಾಲೂಕು ಕಚೇರಿವರೆಗೆ ಮೆರವಣಿಗೆ ತೆರಳಿ ಗೌರಿ ಲಂಕೇಶ್ ಅವರ ಹತ್ಯೆ ನಡೆಸಿದರನ್ನು ಬಂಧಿಸುವಂತೆ ಒತ್ತಾಯಿಸಿ ಉಪ ತಹಶೀಲ್ದಾರ್ ಅವರಿಗೆ ಮನವಿ ಮನವಿಸಲ್ಲಿಸಿದರು.

ಈ ವೇಳೆ ಹಿರಿಯ ಪತ್ರಕರ್ತ ಕೆ.ವಿ. ವಾಸು ಮಾತನಾಡಿ, ನಾಡಿನ ಪ್ರಗತಿಪರ ಚಿಂತಕರನ್ನು ಬರ್ಬರ ಹತ್ಯೆ ಮಾಡುವ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ದೊಡ್ಡ ಪೆಟ್ಟು ಬಿದ್ದಹಾಗೇ ಹಾಗಿದೆ. ರಾಜ್ಯ ಸರ್ಕಾರ ಪತ್ರಕರ್ತರ ರಕ್ಷಣೆಗೆ ಮುಂದಾಗಬೇಕು. ಗೌರಿ ಲಂಕೇಶ್ ಹತ್ಯೆ ಹಿಂದ ಕೋಮುಸಾಮರಸ್ಯ ಕದಡುವ ಕೇಲವು ಕಿಡಿಗೇಡಿಗಳು ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿರುವುದು ಖಂಡನೀಯ. ಗೌರಿ ಲಂಕೇಶ್ ಹತ್ಯೆಯ ಮೂಲಕ ಪ್ರಗತಿಪರರ ಧ್ವನಿಯನ್ನು ಅಡಗಿಸುವ ಹುನ್ನಾರ ಹೆಚ್ಚುತ್ತಿರುವುದು ಅತಂಕಕಾರಿ ಬೆಳವಣಿಗೆ ಎಂದರು.

ನಾಡಿನ ಸಾಹಿತಿಗಳಾದ ಎಂ.ಎಂ. ಕಲಬುರ್ಗಿ ಹತ್ಯೆಯನ್ನು ಪತ್ತೆಹಚ್ಚುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಗೌರಿ ಲಂಕೇಶ್ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಸಾಹಿತಿಗಳು, ವಿಚಾರವಾದಿಗಳು, ಪ್ರಗತಿಪರ ಹೋರಾಟಗಾರರಿಗೆ ಹಾಗೂ ಪತ್ರಕರ್ತರಿಗೆ ಭದ್ರತೆಯನ್ನು ಒದಗಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಪತ್ರಕರ್ತರಾದ ಎ.ಜೆ. ಪ್ರಕಾಶಮೂರ್ತಿ, ಎಚ್.ಎಸ್. ಪರಮೇಶ್, ಸಿ.ಕೆ.ಮೂರ್ತಿ, ಶಾಮಿಯಾನಚಂದ್ರು, ಬಿ.ಎಲ್.  ಸೋಮಶೇಖರ್, ಟಿ.ಮಂಜಪ್ಪ. ಸಿ.ಹೆಚ್. ಮೂರ್ತಿ, ಎಂ.ಎನ್.ಜಗದೀಶ್, ಬಾಲುಮಚ್ಚೇರಿ, ದೇವರಾಜು, ಜಗದೀಶ್, ಭೈರೇಶ್, ಸೋಮಶೇಖರ್ ನಾಡಿಗ್, ಟಿ.ಪ್ರಕಾಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News