×
Ad

ಯಡಿಯೂರಪ್ಪ ಸಹಿತ 50 ಮಂದಿಯ ವಿರುದ್ಧ ಪ್ರಕರಣ ದಾಖಲು

Update: 2017-09-07 22:35 IST

ಮಂಗಳೂರು, ಸೆ.7: ನಗರದ ನೆಹರೂ ಮೈದಾನದಲ್ಲಿ ಗುರುವಾರ ಪ್ರತಿಭಟನಾ ಸಮಾವೇಶ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದರು. ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶ ಉಲ್ಲಂಘಿಸಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ ಪೊಲೀಸ್ ಇಲಾಖೆಗೆ ಸವಾಲಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದರು ಇನ್‌ಸ್ಪೆಕ್ಟರ್ ಶಾಂತರಾಮ್ ಅವರ ದೂರಿನ ಮೇರೆಗೆ ಬಿಜೆಪಿ ಮುಖಂಡರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಶೋಭಾ ಕರಂದ್ಲಾಜೆ, ಈಶ್ವರಪ್ಪ, ಪ್ರಹ್ಲಾದ್ ಜೋಷಿ, ಆರ್. ಅಶೋಕ್, ನಳಿನ್ ಕುಮಾರ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಪ್ರತಿಭಟನಾ ಸ್ಥಳದಲ್ಲಿದ್ದ ವೇದಿಕೆ, 2 ಲಾರಿ, ಸೌಂಡ್ ಬಾಕ್ಸ್, ಬ್ಯಾನರ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ತಿಳಿಸಿದ್ದಾರೆ. 

ಈ ಎಲ್ಲ ನಾಯಕರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 106, 108, ಸಾರ್ವಜನಿಕ ತೊಂದರೆ ನೀಡಿದ ಕಾರಣಕ್ಕೆ ಐಪಿಸಿ, 286, 301, ಅಕ್ರಮ ಕೂಟ ಸೇರಿದಕ್ಕೆ 143, 149 ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News