ಕಾರು-ಲಾರಿ ಮುಖಾಮುಖಿ ಡಿಕ್ಕಿ: 9 ಜನರ ಸಾವು

Update: 2017-09-13 06:48 GMT

 ಕಾರವಾರ, ಸೆ.13: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಮಹೀಂದ್ರಾ ಝೈಲೊ ಕಾರು ಹಾಗೂ ಲಾರಿ ನಡುವೆ ಬುಧವಾರ ಬೆಳಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

ಕಾರವಾರ ಪೊಲೀಸ್ ಠಾಣೆ ವ್ಯಾಪ್ತಿಯ ಅರಬೈಲು ಘಟ್ಟದ ಬಳಿಯ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 10 ಜನರ ತಂಡ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿ ಬೆಳಗಾವಿಗೆ ವಾಪಸಾಗುತ್ತಿತ್ತು. ಅಪಘಾತದ ರಭಸಕ್ಕೆ ಮೂವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಕಾರು ತಪ್ಪು ಬದಿಯಿಂದ ಚಲಿಸಿರುವುದೇ ಅಪಘಾತಕ್ಕೆ ಕಾರಣವಾಗಿದ್ದು, ಮೃತಪಟ್ಟವರು ಮಾಜಿ ಶಾಸಕರೊಬ್ಬರ ಸಂಬಂಧಿಕರು ಎನ್ನಲಾಗಿದೆ. ಹೊರರಾಜ್ಯಕ್ಕೆ ಸೇರಿದ್ದ ಲಾರಿ ಚಾಲಕ ಹಾಗೂ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

ಗಾಯಾಳುವನ್ನು ಯಲ್ಲಾಪುರ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಮೃತಪಟ್ಟವರು ಬೆಳಗಾವಿಯ ರಾಯಬಾಗದವರು ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News