ಹಲವು ಪ್ರಕರಣದ ಆರೋಪಿ ಬಂಧನ

Update: 2017-09-15 17:42 GMT

ತುಮಕೂರು, ಸೆ.15: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಭಾಗಿಯಾಗಿದ್ದ ಖದೀಮನೋರ್ವನನ್ನು ಬಂಧಿಸಿರುವ ಹೆಬ್ಬೂರು ಪೊಲೀಸರು ಆತನಿಂದ ಸುಮಾರು 6 ಲಕ್ಷ ರೂ. ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಗುಬ್ಬಿ ತಾಲೂಕು ಸಿ.ಎಸ್. ಪುರ ಹೋಬಳಿ ಮಣಿಕುಪ್ಪೆ ಗ್ರಾಮದ ವಾಸಿ ಮಹೇಶ್ ಎಲ್. ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಸದರಿ ಆರೋಪಿ ಹೆಬ್ಬೂರು ಪೊಲೀಸ್ ಠಾಣೆ, ಕುಣಿಗಲ್ ಪೊಲೀಸ್ ಠಾಣೆ, ಸಿ.ಎಸ್. ಪುರ ಪೊಲೀಸ್ ಠಾಣೆ, ಕುದೂರು ಪೊಲೀಸ್ ಠಾಣೆ ಹಾಗೂ ಬೆಂಗಳೂರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದನೆ ಎನ್ನಲಾಗಿದೆ.

ಈತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾಗೋಪಿನಾಥ್, ಅಡಿಷನಲ್ ಎಸ್ಪಿ ಶೋಭಾರಾಣಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಧರ್ಮೇಂದ್ರ, ಕ್ಯಾತ್ಸಂದ್ರ ಸಿಪಿಐ ರಾಮಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಹೆಬ್ಬೂರು ಪಿಎಸ್ಸೈ ಶ್ರೀಕಾಂತ್ ಮತ್ತು ಸಿಬ್ಬಂದಿ ಸದರಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ, ಈತನಿಂದ ಕೃಷಿ ಯಂತ್ರೋಪಕರಣ, ಪವರ್ ಟಿಲ್ಲರ್, ಟ್ರ್ಯಾಕ್ಟರ್ ಮತ್ತು ಟ್ಯಾಕ್ಟರ್‍ನ 4 ಟೈರ್‍ಗಳು, 2 ದ್ವಿಚಕ್ರ ವಾಹನಗಳು ಸೇರಿದಂತೆ ಸುಮಾರು 6 ಲಕ್ಷಕ್ಕೂ ಅಧಿಕ ಬೆಲೆಯ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಸದರಿ ಆರೋಪಿಯನ್ನು ಮಾಲು ಸಮೇತ ಪತ್ತೆಹಚ್ಚಿ ಬಂಧಿಸುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News