×
Ad

​ಮೀನುಗಾರನ ಮೃತದೇಹ ಪತ್ತೆ

Update: 2017-09-19 23:03 IST

ಗಂಗೊಳ್ಳಿ, ಸೆ.19: ಗಂಗೊಳ್ಳಿ ಬಂದರಿನಲ್ಲಿ ನಿಲ್ಲಿಸಿದ್ದ ಸಾಯಿಪಂಚರಿ ಬೋಟಿನಿಂದ ಸೆ.17ರ ಅಪರಾಹ್ನದಿಂದ ನಾಪತ್ತೆಯಾಗಿದ್ದ ಭಟ್ಕಳದ ಕೃಷ್ಣಕುಮಾರ್ ಎಂಬವರ ಮೃತದೇಹ ಇಂದು ಬೆಳಗ್ಗೆ 6:30ರ ಸುಮಾರಿಗೆ ಸಮುದ್ರದಲ್ಲಿ ಪತ್ತೆಯಾಗಿದೆ.

ಇವರು ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದಾಗ ಆಕಸ್ಮಿಕ ವಾಗಿ ಗಂಗೊಳ್ಳಿ ಧಕ್ಕೆಯ ಪಂಚಗಂಗಾ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇವರ ಮೃತದೇಹ ಗಂಗೊಳ್ಳಿ ಲೈಟ್ಹೌಸ್ ಸಮುದ್ರ ಕಿನಾರೆ ಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News