ಸೆ.22ರಂದು ಪಿಬಿಎಸ್ ಸ್ಮರಣೆ

Update: 2017-09-19 18:04 GMT

ಬೆಂಗಳೂರು, ಸೆ.19: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ವತಿಯಿಂದ ಹಿನ್ನೆಲೆ ಗಾಯಕ ಪಿ.ಬಿ.ಶ್ರೀನಿವಾಸ್ ಸ್ಮರಣೆ ಕಾರ್ಯಕ್ರಮವನ್ನು ಸೆ.22ರಂದು ನಗರದ ಯಶವಂತಪುರದಲ್ಲಿರುವ ಶ್ರೀ ಶಾರದಾ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿದೆ.

ಹಿರಿಯ ಸಿನೆಮಾ ನಿರ್ದೇಶಕ ಎಸ್.ಕೆ.ಭಗವಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪನ್ಯಾಸಕ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ಪಿ.ಬಿ.ಶ್ರೀನಿವಾಸ್ ಸ್ಮರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜೆ.ಪ್ರಭಾಕರ ಪಟೇಲ್, ಮಲ್ಲೇಶ್ವರಂ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಗಣೇಶ್‌ರಾವ್ ಕೇಸರ್ಕರ್, ಕನ್ನಡ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ ಹಾಗೂ ಕಾರ್ಯಾಧ್ಯಕ್ಷ ಸಿದ್ದಯ್ಯ ಭಾಗವಹಿಸಲಿದ್ದಾರೆಂದು ಪ್ರಕಟನೆ ತಿಳಿಸಿದೆ.



 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News