23ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
Update: 2017-09-20 13:48 GMT
ಬಂಟ್ವಾಳ, ಸೆ. 20: ಬಂಟ್ವಾಳ ಮತ್ತು ಪಾಣೆಮಂಗಳೂರು ಕಾಂಗ್ರೆಸ್ನ ಬ್ಲಾಕ್ ಸಮಿತಿ ಆಶ್ರಯದಲ್ಲಿ ತಾಲೂಕು ಪಂಚಾಯತ್ ಕಚೇರಿ ಬಳಿ ಸೆ. 23ರಂದು ಮಧ್ಯಾಹ್ನ 2.30ಕ್ಕೆ ಕಾರ್ಯಕರ್ತರ ಸಮಾವೇಶ ನಡೆಯಲಿದೆ.
ಕಾರ್ಯಕ್ರಮವನ್ನು ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪಿ.ಎಸ್.ವಿಷ್ಣುನಾಥ್ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಾಜಕುಮಾರ್ ಭಾಗವಹಿಸುವರು ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.