ಪಾಣೆಮಂಗಳೂರು: ಅಕ್ರಮ ಮರಳು ಟಿಪ್ಪರ್ ವಶಕ್ಕೆ
Update: 2017-09-20 15:56 GMT
ಬಂಟ್ವಾಳ, ಸೆ. 20: ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಲ್ಲಿನ ನೇತ್ರಾವತಿ ನದಿಯಿಂದ ಮೇಲೆತ್ತಿದ ಮರಳನ್ನು ಅಕ್ರಮವಾಗಿ ಬೆಂಗಳೂರು ಕಡೆಗೆ ಸಾಗಿಸುತ್ತಿದ್ದ ವೇಳೆ ಮೆಲ್ಕಾರ್ ಸಂಚಾರಿ ಠಾಣಾಧಿಕಾರಿ ವಿಠಲ ಶೆಟ್ಟಿ ನೇತೃತ್ವದ ಪೊಲೀಸರು ವಶಪಡಿಸಿಕೊಂಡ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇದೇ ವೇಳೆ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಪೊಲೀಸರು ವಶಪಡಿಸಿಕೊಂಡ ಟಿಪ್ಪರ್ ಮತ್ತು ಮರಳಿನ ಒಟ್ಟು ಮೌಲ್ಯ ರೂ 10.10ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಟಿಪ್ಪರ್ ಚಾಲಕ ಮತ್ತು ಮಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.