ಸತತ 13 ಗಂಟೆಗಳಿಂದ ಕಡತಗಳ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು

Update: 2017-09-21 16:45 GMT

ಚಿಕ್ಕಮಗಳೂರು, ಸೆ.21: ಮಾಜಿ ಮುಖ್ಯಮಂತ್ರಿ ಎಸ್.ಎಂ.  ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಹೆಗಡೆಗೆ ಸೇರಿದ ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸತತ 13 ಗಂಟೆಗಳಿಂದ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿರುವ ಕಾಫಿ ಡೇ ಗ್ಲೋಬಲ್ ಲಿ., ಮೂಡಿಗೆರೆಯಲ್ಲಿರುವ ಮನೆ ಹಾಗೂ ಎಸ್ಟೇಟ್ ಕಚೇರಿಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು,  3 ಐಟಿ ಅಧಿಕಾರಿಗಳ ತಂಡದಿಂದ ಒಟ್ಟು 15ಕ್ಕೂ ಹೆಚ್ಚು ಸಿಬ್ಬಂದಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಡೀ ರಾತ್ರಿ ಐಟಿ ಅಧಿಕಾರಿಗಳಿಂದ ಕಡತಗಳ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈಗಾಗಲೇ ಹೋಟೆಲ್ ನಿಂದ ಊಟವನ್ನು ತರಿಸಿಕೊಂಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News