ಸೆ.25: ಪುರಭವನದಲ್ಲಿ ದಕ್ಷಿಣ ವಿಧಾನ ಸಭಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Update: 2017-09-22 15:38 GMT

ಮಂಗಳೂರು, ಸೆ.22: ಮಂಗಳೂರು ದಕ್ಷಿಣ ವಿಧಾನ ಕ್ಷೇತ್ರದ ಕಾಂಗ್ರೆಸ್ ಕಾರ್ಯ ಕರ್ತರ ಸಮಾವೇಶ ಸೆ.25ರಂದು ಅಪರಾಹ್ನ 2 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ ಮೈಸೂರು ವಿಭಾಗದ ಪಕ್ಷದ ಉಸ್ತುವಾರಿ ಪಿ.ಸಿ.ವಿಷ್ಣನಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಮುಖ್ಯ ಸಚೇತಕ ಐವನ್ ಡಿ ಸೋಜ,ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರಂಭದ ವೇದಿಕೆಗೆ ಕೆಪಿಸಿಸಿ ಕಾರ್ಯದರ್ಶಿ ದಿವಂಗತ ಮುಹಮ್ಮದ್ ಬದ್ರುದ್ಧೀನ್‌ರ ಹೆಸರನ್ನು ನಾಮಕರಣ ಮಾಡಲಾಗುವುದು ಮತ್ತು ಅದೇ ದಿನ ಅವರ ಪುಣ್ಯ ತಿಥಿಯನ್ನು ಆಚರಿಸಲಾಗುವುದು ಎಂದು ಜೆ.ಆರ್.ಲೋಬೊ ತಿಳಿಸಿದ್ದಾರೆ.

‘ಮನೆ ಮನೆಗೆ ಕಾಂಗ್ರೆಸ್ ’ಅಭಿಯಾನ ಆರಂಭ:- ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ರಾಜ್ಯ ಸರಕಾರದ ಸಾಧನೆಯ ಬಗ್ಗೆ ಮನೆ ಮನೆಗೆ ಎಂಬ ಕಾಂಗ್ರೆಸ್ ಅಭಿಯಾನ ಸೆ.23ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು.

ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಕದ್ರಿ ಶಿವಭಾಗ್ ಬಳಿಯ ಕಾಂಗ್ರೆಸ್ ಕಚೇರಿಬಳಿಯಿಂದ ಆರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜೆ.ಎ.ಸಲೀಂ,ಕಳ್ಳಿಗೆ ತಾರಾನಾಥ ಶೆಟ್ಟಿ,ಮನಪಾ ಸದಸ್ಯರಾದ ಮಹಾಬಲ ಮಾರ್ಲ, ಅಪ್ಪಿ ಮತ್ತು ಇತರ ಕಾಂಗ್ರೆಸ್ ಪದಾಧಿಕಾರಿಗಳಾದ ಮೋಹನ್ ಶೆಟ್ಟಿ,ಸಂತೋಷ್ ಕುಮಾರ್ ಶೆಟ್ಟಿ, ಅಲೆಸ್ಟಿನ್ ಸಿಕ್ವೇರಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News