ರಾಜ್ಯ ರಾಜಕಾರಣಕ್ಕೆ ಮರಳಿದ ಡಿ.ವಿ ಸದಾನಂದ ಗೌಡ
Update: 2017-09-23 05:23 GMT
ಹೊಸದಿಲ್ಲಿ, ಸೆ.23: ಬಿಜೆಪಿ ಮುಂದಿನ ವಿಧಾನ ಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದು, ರಾಜ್ಯ ಬಿಜೆಪಿ ಸಾಂಪ್ರದಾಯಿಕ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ನೇಮಕಗೊಂಡಿದ್ದಾರೆ.
28 ಮಂದಿ ಸದಸ್ಯರ ಸಾಂಪ್ರದಾಯಿಕ ಪ್ರಚಾರ ಸಮಿತಿಗೆ ಡಿ.ವಿ. ಸದಾನಂದ ಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಡಿವಿಎಸ್ ಅವರು ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ.