×
Ad

ರಾಜ್ಯ ಸರಕಾರ 158 ಭರವಸೆ ಈಡೇರಿಕೆ: ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್

Update: 2017-09-23 17:31 IST

ಮಂಗಳೂರು, ಸೆ.23 : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆನೇಕ ಜನಪರ ಯೋಜನೆಗಳನ್ನು ರೂಪಿಸಿಕೊಂಡು ಸಮಾಜದಲ್ಲಿ ಅವಕಾಶ ವಂಚಿತರ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ 165 ಭರವಸೆಗಳ ಪೈಕಿ 158ನ್ನು ಈಡೇರಿಸಿವೆ. ‘ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ’ದ ಮೂಲಕ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ಮೈಸೂರು ವಿಭಾಗ ಉಸ್ತುವಾರಿ ವಿಷ್ಣುನಾಥನ್ ಹೇಳಿದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕದ್ರಿ ಶಿವಭಾಗ್‌ನಲ್ಲಿ ಶನಿವಾರ ಉದ್ಘಾಟನೆಗೊಂಡ ‘ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ’ವನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ ಮನೆ ಮನೆಗೆ ಕಾಂಗ್ರೆಸ್ ಭೇಟಿ ಮೂಲಕ ಕಾಂಗ್ರೆಸ್ ಜನರ ಮನ ಮನೆಗೆ ತಲುಪುವ ಕಾರ್ಯ ಮಾಡುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಜೆ.ಆರ್. ಲೋಬೊ, ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಕೆಪಿಸಿಸಿ ದ.ಕ.ಜಿಲ್ಲಾ ಉಸ್ತುವಾರಿ ಯು.ಬಿ.ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರನಾಥ ಶೆಟ್ಟಿ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಮನಪಾ ಉಪ ಮೇಯರ್ ರಜನೀಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗವೇಣಿ, ಅಬ್ದುಲ್ ರವೂಫ್, ಸಬಿತಾ ಮಿಸ್ಕಿತ್, ಮನಪಾ ಸದಸ್ಯರಾದ ಭಾಸ್ಕರ್, ನವೀನ್ ಡಿಸೋಜ, ಅಪ್ಪಿ, ಆಶೋಕ್ ಡಿ.ಕೆ., ಕೇಶವ ಮರೋಳಿ, ಎ.ಸಿ. ವಿನಯರಾಜ್, ಅಬ್ದುಲ್ ಲತೀಫ್, ಪ್ರವೀಣ್‌ಚಂದ್ರ ಆಳ್ವ , ಆಶಾ ಡಿಸಿಲ್ವ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಸಲೀಂ, ಡಿಸಿಸಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಸುಧೀರ್ ಟಿ..ಕೆ., ಡೆನ್ನಿಸ್ ಡಿಸಿಲ್ವ, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News