ಸರಣಿ ಅಪಘಾತ: ಇಬ್ಬರಿಗೆ ಗಾಯ

Update: 2017-09-24 15:08 GMT

ಬೆಂಗಳೂರು, ಸೆ.24: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯ ವೆಂಕಟಾಲ ಬಳಿ ಶನಿವಾರ ತಡರಾತ್ರಿ ಬಿಎಂಟಿಸಿ ಬಸ್, ಬೊಲೆರೊ ಗೂಡ್ಸ್ ವಾಹನ ಹಾಗೂ ಲಾರಿಯ ನಡುವೆ ಸರಣಿ ಅಘಾತವಾಗಿ ಇಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಲಕ್ಷ್ಮಿನರಸಿಂಹ ಹಾಗೂ ಅಶೋಕ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೆಂಕಟಾಲ ಬಳಿ ರಾತ್ರಿ 10ರ ವೇಳೆ ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ಬ್ರೇಕ್ ಹಾಕಿದ ಕಾರಣ ಬಸ್ ಹಿಂದೆ ಬರುತ್ತಿದ್ದ ಬೊಲೆರೋ ಢಿಕ್ಕಿ ಹೊಡೆದರೆ, ಲಾರಿ, ಬೊಲೆರೋ ವಾಹದಲ್ಲಿದ್ದ ಇಬ್ಬರಿಗೆ ಗಾಯಗೊಂಡಿದ್ದಾರೆ.

ಈ ಮೊಕದ್ದಮೆ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News