ಎಂ.ಎಸ್.ರಜನಿಕಾಂತ್ ನಿಧನ

Update: 2017-09-25 11:19 GMT

ಬೆಂಗಳೂರು, ಸೆ.25: ಭಾರತೀಯ ಸಮಾಚಾರ ಮತ್ತು ಪ್ರಸಾರ ಸೇವೆಯ ನಿವೃತ್ತ ಅಧಿಕಾರಿ ಎಂ.ಎಸ್.ರಜನಿಕಾಂತ್ ಇಂದು ಬೆಳಗ್ಗೆ ನಿಧನ ಹೊಂದಿದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಯೋಜನಾ, ಆಕಾಶವಾಣಿ, ದೂರದರ್ಶನ, ಡಿ.ಎ.ವಿ.ಪಿ.ಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ಅಂಚಿನಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆಯ ಬೆಂಗಳೂರು ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ರಜನಿಕಾಂತ್ ಅವರು ಕಳೆದ ಕೆಲವೇ ತಿಂಗಳುಗಳ ಹಿಂದೆ ನಿವೃತ್ತರಾಗಿದ್ದರು.

ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಅವರು ಕೆಲವು ವರ್ಷಗಳಿಂದ ಡಯಾಲಿಸಿಸ್ ಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದರು. ಅವರ ನಿವಾಸದಲ್ಲಿ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News