ಪದ್ಮಭೂಷಣ ಪ್ರಶಸ್ತಿಗೆ ಸಿಂಧು ಹೆಸರು ಶಿಫಾರಸು

Update: 2017-09-25 06:33 GMT

ಹೊಸದಿಲ್ಲಿ, ಸೆ.25: ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಜಯಿಸಿರುವ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾಸಚಿವಾಲಯ ಸೋಮವಾರ ಶಿಫಾರಸು ಮಾಡಿದೆ.

ಇತ್ತೀಚೆಗಷ್ಟೇ ಕೊರಿಯಾ ಓಪನ್ ಸೂಪರ್ ಸರಣಿ ಪ್ರಶಸ್ತಿ ಜಯಿಸಿದ ಭಾರತದ ಮೊದಲ ಶಟ್ಲರ್ ಎನಿಸಿಕೊಂಡಿದ್ದ ಸಿಂಧು ಕ್ರಿಕೆಟಿಗ ಎಂ.ಎಸ್. ಧೋನಿ ಬಳಿಕ 2017ರ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸುಗೊಂಡಿರುವ ಭಾರತದ ಎರಡನೆ ಅಥ್ಲೀಟ್ ಆಗಿದ್ದಾರೆ.

ವಿಶ್ವದ ನಂ.2ನೆ ಆಟಗಾರ್ತಿ ಸಿಂಧು 2015ರ ಮಾರ್ಚ್‌ನಲ್ಲಿ ಭಾರತದ ನಾಲ್ಕನೆ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ಪದ್ಮಶ್ರೀಗೆ ಭಾಜನರಾಗಿದ್ದರು.

22ರ ಹರೆಯದ ಆಟಗಾರ್ತಿ ಸಿಂಧು ಪ್ರಸ್ತುತ ಭರ್ಜರಿ ಫಾರ್ಮ್‌ನಲ್ಲಿದ್ದು ಗ್ಲಾಸ್ಗೊದಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನ, ಇಂಡಿಯಾ ಓಪನ್ ಸೂಪರ್ ಸರಣಿ ಹಾಗೂ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಟೂರ್ನಿಯಲ್ಲಿ ಈಗಾಗಲೇ ಪ್ರಶಸ್ತಿ ಜಯಿಸಿದ್ದಾರೆ.

 ಭಾರತ 2007ರಲ್ಲಿ ಟ್ವೆಂಟಿ-20 ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ಪ್ರಶಸ್ತಿ ಗೆಲ್ಲಲು ತಂಡವನ್ನು ಮುನ್ನಡೆಸಿದ್ದ ಧೋನಿ ಹೆಸರನ್ನು ಸೆ.20 ರಂದು ಬಿಸಿಸಿಐ ಪದ್ಮಭೂಷಣ ಪ್ರಶಸ್ತಿ ಶಿಫಾರಸು ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News