‘ಹಿರಿಯರೆಡೆಗೆ ನಮ್ಮ ನಡಿಗೆ’ ಸನ್ಮಾನ ಕಾರ್ಯಕ್ರಮ

Update: 2017-09-25 13:13 GMT

ಉಡುಪಿ, ಸೆ.25: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿ ಯಿಂದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಉಡುಪಿ ಶೋಕ ಮಾತಾ ಇಗರ್ಜಿ ಧರ್ಮಗುರು, ವಿಶ್ರಾಂತ ಪ್ರಾಂಶುಪಾಲ ಫಾ.ವೆಲೇರಿಯನ್ ಮೆಂಡೋನ್ಸಾ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತಾಲೂಕು ಘಟಕ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಪೆರ್ಡೂರು ಹೋಬಳಿ ಅಧ್ಯಕ್ಷ ಚಂದ್ರ ನಾಯ್ಕಾ, ಜಿಲ್ಲಾ ಗೌರವ ಕಾರ್ಯದರ್ಶಿ ನಾರಾಯಣ ಮಡಿ, ಸದಸ್ಯ ಪ್ರಶಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News