ಮಂಡ್ಯ: ದೇವಾಲಯದಲ್ಲಿ ಚಿನ್ನಾಭರಣ ಕಳವು

Update: 2017-09-25 13:34 GMT

ಮಂಡ್ಯ, ಸೆ.25: ಮುನೇಶ್ವರ ದೇವಾಲಯದ ಬಾಗಿಲು ಮುರಿದು ಚಿನ್ನ, ಬೆಳ್ಳಿ ಆಭರಣ, ಹುಂಡಿ ಹಣ ದೋಚಿದ ಘಟನೆ ಕೃಷ್ಣರಾಜಪೇಟೆ ತಾಲೂಕು ರಾಜಘಟ್ಟ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ.

ಲಕ್ಷಾಂತರ ಬೆಲೆ ಬಾಳುವ ಆಭರಣಗಳು ಮತ್ತು ಹುಂಡಿಯಲ್ಲಿದ್ದ ಸಾವಿರಾರು ರೂ.ದುಷ್ಕರ್ಮಿಗಳು ಕಳವು ಮಾಡಿದ್ದಾರೆ ಎಂದು ದೇವಾಲಯದ ಅರ್ಚಕ ಪೊಲೀಸರಿಗೆ ದೂರು ನೀಡಿದ್ದಾರೆ.

ಸೋಮವಾರ ಅರ್ಚಕ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದ್ದು, ಪಟ್ಟಣ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News