ಚಿಕ್ಕಮಗಳೂರು: ರೈತ ಆತ್ಮಹತ್ಯೆ

Update: 2017-09-25 17:28 GMT

ಚಿಕ್ಕಮಗಳೂರು, ಸೆ.25: ಕೃಷಿಗಾಗಿ ಮಾಡಿದ ಸಾಲದ ಹೊರೆಯಿಂದ ಬೇಸತ್ತು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರದಲ್ಲಿ ಸೋಮವಾರ ನಡೆದಿದೆ.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನನ್ನು ಜಯಣ್ಣ(45) ಎಂದು ಗುರುಸಿಲಾಗಿದೆ.

ಈತ ತನ್ನ ಜಮೀನಿನಲ್ಲಿ ಬೆಳೆ ಬೆಳೆಯುವ ದೃಷ್ಟಿಯಿಂದ ವಿವಿಧ ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಮಳೆಯಿಲ್ಲದೆ  ಬೆಳಸಿದ ಬೆಳೆಗಳು ನಷ್ಟ ಹೊಂದಿದ್ದರಿಂದ ಮನನೊಂದು ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಾಸನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News